ADVERTISEMENT

ದೊಡ್ಡಬಳ್ಳಾಪುರ | ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 7:26 IST
Last Updated 26 ಜೂನ್ 2022, 7:26 IST
ತರುಣ್‌
ತರುಣ್‌   

ದೊಡ್ಡಬಳ್ಳಾಪುರ:ವಡ್ಡರಹಳ್ಳಿಪಾಳ್ಯ ಸಮೀಪ ಪಾದಚಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅದೇ ಗ್ರಾಮದ ಲಕ್ಷ್ಮೀಶ (45) ಎಂಬುವರು ಮೃತಪಟ್ಟಿದ್ದಾರೆ.

ನಗರದ ರೈಲ್ವೆ ನಿಲ್ದಾಣ ಸಮೀಪದ ಸ್ಕೌಟ್ಸ್‌ ಕ್ಯಾಂಪ್ ರಸ್ತೆಯಲ್ಲಿ ದ್ವಿಚಕ್ರವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಕೆಂಪೇಗೌಡ ನಗರದ ನಿವಾಸಿ ತರುಣ್ (21) ಮೃತಪಟ್ಟಿದ್ದಾರೆ.

ಮೃತ ತರುಣ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ನೋವಿನಲ್ಲಿಯೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಶನಿವಾರ ನಡೆದ ಅಪಘಾತ ಕುರಿತಂತೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.