ADVERTISEMENT

ಉಮೇದುವಾರರು ಪಟ್ಟಿಯಲ್ಲಿ ಮುದ್ರಣದೋಷ: ದೂರು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2019, 13:39 IST
Last Updated 18 ಏಪ್ರಿಲ್ 2019, 13:39 IST
ಮುದ್ರಣ ದೋಷ ತೋರಿಸುತ್ತಿರುವ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ
ಮುದ್ರಣ ದೋಷ ತೋರಿಸುತ್ತಿರುವ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ   

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉಮೇದುವಾರರ ಪಟ್ಟಿಯಲ್ಲಿ ಮುದ್ರಣ ದೋಷ ಕಂಡುಬಂದಿದೆ.

ನಮೂನೆ 7ಎ ಅನ್ವಯ ಚುನಾವಣೆಗೆ ಸ್ವರ್ಧಿಸಿರುವ ಉಮೇದುವಾರರ ಕ್ರಮ ಸಂಖ್ಯೆ 7ರಲ್ಲಿ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ ಹೆಸರಿನ ಮುಂಭಾಗ ಕರ್ನಾಟಕ ಜನತಾ ಪಕ್ಷ ಎಂದು ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿದೆ. ಆ ಸಾಲಿನ ಕೆಳಭಾಗದಲ್ಲಿ ಸಮಾಜವಾದಿ ಜನತಾ ಪಾರ್ಟಿ (ಕರ್ನಾಟಕ) ಎಂದು ಆಂಗ್ಲ ಭಾಷೆಯಲ್ಲಿ ಪ್ರಕಟಗೊಂಡಿದೆ.

ಮುದ್ರಣ ದೋಷದ ಬಗ್ಗೆ ಚುನಾವಣಾಧಿಕಾರಿಗೆ ದೂರು ನೀಡಿ ಮಾತನಾಡಿದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ, ಇದು ಕೇವಲ ಮುದ್ರಣ ದೋಷವೆಂದು ಅನಿಸುವುದಿಲ್ಲ. ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಉದ್ದೇಶ ಪೂರ್ವಕವಾಗಿ ರಾಷ್ಟ್ರೀಯ ಪಕ್ಷಗಳಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ದೂರಿದರು.

ADVERTISEMENT

ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಹಿರಿಯ ಚುನಾವಣಾಧಿಕಾರಿಗೆ ದೂರಿನ ಪ್ರತಿ ಕಳುಹಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.