ADVERTISEMENT

ದೇವನಹಳ್ಳಿ | ತಾಯಿ–ಮಕ್ಕಳ ಆರೋಗ್ಯ ರಕ್ಷಣೆ ಆದ್ಯತೆ: ಸೈಯಿದಾ ಅಯಿಷಾ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 2:05 IST
Last Updated 21 ಆಗಸ್ಟ್ 2025, 2:05 IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ, ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಮಾತನಾಡಿದರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ, ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಮಾತನಾಡಿದರು   

ದೇವನಹಳ್ಳಿ: ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ, ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ, ಶಿಶು ಮತ್ತು ತಾಯಿ ಮರಣ ಸಂಭವಿಸದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.

ADVERTISEMENT

ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಗಿ, ಮಲೇರಿಯಾ, ಚಿಕೂನ್ ಗುನ್ಯಾ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ. ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ. ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.