ADVERTISEMENT

ಲಸಿಕೆ ಮಾರಾಟ; ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:17 IST
Last Updated 20 ಏಪ್ರಿಲ್ 2021, 3:17 IST
ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ಭೇಟಿ ನೀಡಿದರು. ಜೊತೆಯಲ್ಲಿ ಡಿವೈಎಸ್ ಪಿ ಉಮಾಶಂಕರ್‍ ಉಪಸ್ಥಿತರಿದ್ದರು.
ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ಭೇಟಿ ನೀಡಿದರು. ಜೊತೆಯಲ್ಲಿ ಡಿವೈಎಸ್ ಪಿ ಉಮಾಶಂಕರ್‍ ಉಪಸ್ಥಿತರಿದ್ದರು.   

ಹೊಸಕೋಟೆ: ನಗರದ ಎಂ.ವಿ.ಜೆ ಆಸ್ಪತ್ರೆಗೆ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಭೇಟಿ ನೀಡಿ ಕೋವಿಡ್ ಸೋಕಿತರ ಆರೈಕೆ ಬಗ್ಗೆ ಆಸ್ಪತ್ರೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಎಂವಿಜೆ ಆಸ್ಪತ್ರೆಯ ಹೊರಗುತ್ತಿಗೆ ಫಾರ್ಮಸಿಯಲ್ಲಿ ಕಾರ್ಯನಿರ್ವಸುತ್ತಿದ್ದ ದಿನೇಶ್ ಎಂಬ ವ್ಯಕ್ತಿ ಎಂ.ವಿ.ಜೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಕೋವಿಡ್ ಸೋಕಿತರ ಹೆಸರಿನಲ್ಲಿ ರೆಮ್ಡಿಸಿವರ್‍ ಲಸಿಕೆ ತರಿಸಿಕೊಂಡು ಇತರೆ ಆಸ್ಪತ್ರೆಗಳಿಗೆ ಹಾಗೂ ವೈದ್ಯರ ಸೂಚನೆ ಇರುವ ಚೀಟಿಯುಳ್ಳವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ದ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT