ADVERTISEMENT

ಕೋವಿಡ್ -19 ಲಸಿಕಾ ತಾಲೀಮು: ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 4:51 IST
Last Updated 9 ಜನವರಿ 2021, 4:51 IST
ಕೊರೊನಾ ಲಸಿಕೆ ತಾಲೀಮಿನಲ್ಲಿ ಭಾಗವಹಿಸಿದ್ದ ವೈದ್ಯರು ಹಾಗೂ ಪೊಲೀಸ್‌ ಸಿಬ್ಬಂದಿ
ಕೊರೊನಾ ಲಸಿಕೆ ತಾಲೀಮಿನಲ್ಲಿ ಭಾಗವಹಿಸಿದ್ದ ವೈದ್ಯರು ಹಾಗೂ ಪೊಲೀಸ್‌ ಸಿಬ್ಬಂದಿ   

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ತಡೆಗಟ್ಟಲು ಲಸಿಕೆ ನೀಡುವ ಕುರಿತು ಕೋವಿಡ್ -19 ಲಸಿಕಾ ತಾಲೀಮು ತಾಲ್ಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಶುಕ್ರವಾರ ನಡೆಯಿತು.

ನಗರದ ತಾಯಿ ಮತ್ತು ಮಗು ಸಾರ್ವಜನಿಕ ಆಸ್ಪತ್ರೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎ.ಎನ್.ಶ್ರೀನಿವಾಸ್, ಒಂದೆರಡು ವಾರಗಳಲ್ಲಿ ಕೋವಿಡ್ ಲಸಿಕೆ ನಗರದ ಆಸ್ಪತ್ರೆಗೆ ಬರುವ ನಿರೀಕ್ಷೆ ಇದೆ. ಕೊರೊನಾ ಸೋಂಕು ತಡೆಗಟ್ಟಲು ನೀಡಲಾಗುವ ಲಸಿಕೆ ಸಂಗ್ರಹಕ್ಕೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಈ ಕುರಿತು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ನೀಡಿಕೆ ಕುರಿತಂತೆ ರಾಜ್ಯ ಸರ್ಕಾರದಿಂದ ಬರುವ ಮಾರ್ಗದರ್ಶಿ ಸೂಚನೆ ಅನುಸಾರ ಲಸಿಕೆ ನೀಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ 25 ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ.

ಶುಕ್ರವಾರ ನಡೆದ ತಾಲೀಮಿನಲ್ಲಿ ಮೊದಲು ನೋಂದಾಯಿತ ಆರೋಗ್ಯ ಕಾರ್ಯಕರ್ತರು ಮೊದಲು ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಿ ಕೋವಿಡ್ ಮುಂಜಾಗ್ರತೆಯೊಂದಿಗೆ ಕೇಂದ್ರದಲ್ಲಿ ಗುರುತಿನ ಚೀಟಿ ತೋರಿಸಬೇಕು. ಫಲಾನುಭವಿ ನೋಂದಣಿ ಪರಿಶೀಲಿಸಿ ಚುಚ್ಚು ಮದ್ದು ಕೊಠಡಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ್ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ರಮೇಶ್, ಡಾ.ಅರುಣ್ ಕುಮಾರ್ ಇತರರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.