ವಿಜಯಪುರ (ದೇವನಹಳ್ಳಿ): ಪಟ್ಟಣದ ಮಹರ್ಷಿ ವಾಲ್ಮೀಕಿ ನಾಯಕ ಸಂಘದಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗೌರವಾಧ್ಯಕ್ಷ ಪಿ.ನಾರಾಯಣಸ್ವಾಮಿ, ಅಧ್ಯಕ್ಷ ಶ್ರೀರಾಮಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಎಂ.ರಾಮು, ಖಜಾಂಚಿ ಮುನಿರಾಜು, ಸಂಘಟನಾ ಕಾರ್ಯದರ್ಶಿ ಎಲೆ ಪಾಂಡುರಂಗ, ಮುಖಂಡರಾದ ಎಲೆ ಮುನಿರಾಜು, ಮಾಳಿಗೇನಹಳ್ಳಿ ವೆಂಕಟೇಶಮೂರ್ತಿ, ಪುರಸಭೆ ಸದಸ್ಯರಾದ ಅನಿಫ್ ಉಲ್ಲಾ, ಎಂ.ನಾರಾಯಣಸ್ವಾಮಿ, ಬೈರೇಗೌಡ, ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷ ಜೆ.ಎನ್.ಶ್ರೀನಿವಾಸ್, ಸಂಘದ ನಿರ್ದೇಶಕರಾದ ಕೆ.ಎಚ್.ಚಂದ್ರಶೇಖರ್, ಬೈಪಾಸ್ ನಾರಾಯಣಸ್ವಾಮಿ, ಮುರಳಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.