ADVERTISEMENT

ಜನರ ಏಳಿಗೆಗೆ ಶ್ರಮಿಸಿದ ವೇಮನ: ಜಗದೀಶ್‌ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 14:13 IST
Last Updated 19 ಜನವರಿ 2020, 14:13 IST
ತಾಲ್ಲೂಕು ಕಚೇರಿಯಲ್ಲಿ  ಭಾನುವಾರ  ವೇಮನ ಜಯಂತಿ ಆಚರಿಸಲಾಯಿತು
ತಾಲ್ಲೂಕು ಕಚೇರಿಯಲ್ಲಿ  ಭಾನುವಾರ  ವೇಮನ ಜಯಂತಿ ಆಚರಿಸಲಾಯಿತು   

ದೊಡ್ಡಬಳ್ಳಾಪುರ: ವೇಮನರು ಸರಳ ಭಾಷೆಗಳಲ್ಲಿ ನುಡಿಗಟ್ಟುಗಳನ್ನು ರಚಿಸಿ ಜನರಿಗೆ ಮನವರಿಕೆ ಮಾಡಿಕೊಡುತ್ತ ಸಮಾಜ ಸುಧಾರಣೆಯಲ್ಲಿ ಶ್ರಮಿಸಿ ಇಂದಿಗೂ ಜನಮಾನಸದಲ್ಲಿ ಅಜರಾಮರರಾಗಿ ಉಳಿದಿದ್ದಾರೆ ಎಂದು ಶ್ರೀವೇಮನ ರೆಡ್ಡಿ ಜನ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್‌ ರೆಡ್ಡಿ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಮಹಾಯೋಗಿ ವೇಮನರ 608ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರಸ್ತುತ ದಿನದಲ್ಲಿ ವೇಮನ ಜಯಂತಿ ನಮಗೆಲ್ಲ ಆದರ್ಶಪ್ರಾಯವಾಗಿದೆ. ಅವರು ಯೋಗಶಾಸ್ತ್ರದಲ್ಲಿ ಪಾಂಡಿತ್ಯವನ್ನು ಪಡೆದಿದ್ದು, ಶ್ರೇಷ್ಠ ಸಂತರಾಗಿ, ದಾರ್ಶನಿಕರಾಗಿ, ಕವಿಯಾಗಿ ಮನುಕುಲದ ಏಳಿಗೆಗೆ ಸರಳ ಸಹಜವಾದ ಪ್ರಕೃತಿ ಧರ್ಮವನ್ನು ಉಪದೇಶಿಸಿದ ಮಹಾಯೋಗಿಗಳು’ ಎಂದರು.

ADVERTISEMENT

ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎನ್.ಹನುಮಂತರೆಡ್ಡಿ ಮಾತನಾಡಿ, ‘17ನೇ ಶತಮಾನದಲ್ಲಿ ಜೀವಿಸಿದ್ದ ವೇಮನ ತತ್ವಜ್ಞಾನಿ, ದಾರ್ಶನಿಕರು. ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಇಹದ ಬದುಕಿನ ಅರಿವಾಗಿ ಭೋಗಜೀವನ ತ್ಯಜಿಸಿದ ವೇಮನರು ಇಹದ ಬದುಕಿನ ಅರಿವು ಪಡೆದುಕೊಂಡು ಪಾರಮಾರ್ಥಿಕ ಹಾದಿಯಲ್ಲಿ ಸಾಗಿದ ಮಹಾಯೋಗಿ ಎನಿಸಿಕೊಂಡವರು’ ಎಂದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಶಿರಸ್ತೆದಾರ್ ಸುರೇಶ್, ರಾಜಸ್ವ ನಿರೀಕ್ಷಕ ನರಸಿಂಹ, ಉಪಾಧ್ಯಕ್ಷ ಶಿವಾರೆಡ್ಡಿ, ಸಹ ಕಾರ್ಯದರ್ಶಿ ಶಂಗಪ್ಪ, ಸಂಘಟನ ಕಾರ್ಯದರ್ಶಿ ರಾಮಾಂಜಿನಪ್ಪ, ಮುಖಂಡರಾದ ಬಿ.ಆನಂದರೆಡ್ಡಿ, ಜಯರಾಮ ರೆಡ್ಡಿ, ಅಶ್ವಥ್‌ ರೆಡ್ಡಿ, ವೆಂಕಟರಾಮ ರೆಡ್ಡಿ, ಪುಟ್ಟರಾಜುರೆಡ್ಡಿ, ಶಿಕ್ಷಕರಾದ ಮಲ್ಲಿಕಾರ್ಜುನ ರೆಡ್ಡಿ, ಹರೀಶ್‍ ರೆಡ್ಡಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.