ADVERTISEMENT

ಕಠಿಣ ಕ್ರಮ: ರೌಡಿ ಶೀಟರ್‌ಗಳಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 5:59 IST
Last Updated 10 ಡಿಸೆಂಬರ್ 2020, 5:59 IST
ರೌಡಿ ಶೀಟರ್‌ಗಳಿಗೆ ಡಿವೈಎಸ್‌ಪಿ ಟಿ.ರಂಗಪ್ಪ ಎಚ್ಚರಿಕೆ ನೀಡಿದರು
ರೌಡಿ ಶೀಟರ್‌ಗಳಿಗೆ ಡಿವೈಎಸ್‌ಪಿ ಟಿ.ರಂಗಪ್ಪ ಎಚ್ಚರಿಕೆ ನೀಡಿದರು   

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಯು ಡಿ. 27ರಂದು ನಡೆಯುವ ಹಿನ್ನೆಲೆಯಲ್ಲಿ ಬುಧವಾರ ಡಿವೈಎಸ್‌ಪಿ ಟಿ. ರಂಗಪ್ಪ ಅವರು ರೌಡಿಶೀಟರ್‌ಗಳ ಪರೇಡ್‌ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ನಗರ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ರೌಡಿಶೀಟರ್‌ಗಳ ಪರೇಡ್‌ನಲ್ಲಿ ಅವರು ಮಾತನಾಡಿದರು.

26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಯಾವುದೇ ಗಲಭೆ ಅಥವಾ ಅಕ್ರಮಗಳಲ್ಲಿ ಭಾಗಿಯಾದರೆ ಕಠಿಣ
ಕ್ರಮ ಕೈಗೊಳ್ಳಲಾಗುವುದು. ಪಂಚಾಯಿತಿ ಚುನಾವಣೆಗೂ ನೊದಲು ಎಲ್ಲಾ ರೌಡಿಶೀಟರ್‌ಗಳ ಮೇಲೆ ನಿಗಾವಹಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗುವುದು. ತಾಲ್ಲೂಕಿನಲ್ಲಿ ಶಾಂತಿಯುತ ಮತದಾನಕ್ಕಾಗಿ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಪೊಲೀಸ್‌ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದರು.

ADVERTISEMENT

ಸರ್ಕಲ್‌ ಇನ್‌ಸ್ಪೆಕ್ಟರ್‌ ಎಂ.ಬಿ. ನವೀನ್‌ಕುಮಾರ್‌, ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್‌, ಮಂಜುನಾಥ್‌, ಬೇಬಿವಾಲೆಕಾರ್‌, ಗಜೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.