
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ತಾಲ್ಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬ ಸುಮಾರು 40 ಅಡಿ ಆಳದ ಪಾಳುಬಾವಿಗೆ ಬಿದ್ದು ಮೃತಟ್ಟಿದ್ದನೆ.
ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ದೊಡ್ಡಬೆಳವಂಗಲ ಠಾಣೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ತರಳಿ ಶವವನ್ನು ಹೊರಕ್ಕೆ ತೆಗೆದಿದ್ದಾರೆ.
ಮೃತನ ಬಳಿ ಇದ್ದ ಮೊಬೈಲ್ ಪರಿಶೀಲಿಸಿದಾಗ ಆತ ಬೆಂಗಳೂರಿನ ಎಂ.ಎಸ್.ಪಾಳ್ಯ ವಾಸಿ ಮೊಣ್ಣಯ್ಯ ಮುತ್ತು (59 ವರ್ಷ) ಎಂದು ಗುರುತಿಸಲಾಗಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.