ADVERTISEMENT

ಸ್ವಾವಲಂಬನೆಯ ಅವಕಾಶ ಸದುಪಯೋಗಪಡಿಸಿಕೊಳ್ಳಿ: ಅನಂತಕುಮಾರಿ ಚಿನ್ನಪ್ಪ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 13:43 IST
Last Updated 16 ಮಾರ್ಚ್ 2020, 13:43 IST
ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ   ಉದ್ಘಾಟಿಸಿದರು
ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ   ಉದ್ಘಾಟಿಸಿದರು   

ದೊಡ್ಡಬಳ್ಳಾಪುರ: ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಅವಕಾಶಗಳಿವೆ. ಇವುಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ ಹೇಳಿದರು.

ಇಲ್ಲಿನ ದೇವರಾಜ ನಗರದ ಸರಸ್ವತಿ ಶಾಲೆಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮಹಿಳೆಗೆ ಸರ್ಕಾರದಿಂದ ಹಲವಾರು ಸವಲತ್ತುಗಳು ದೊರೆಯುತ್ತಿವೆ. ಹೆಣ್ಣು ಮಕ್ಕಳು ಪದವಿ ಶಿಕ್ಷಣ ಪಡೆದು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಬೇಕು. ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಇಂದು ಮರೆಯಾಗುತ್ತಿರುವ ಮೌಲ್ಯಗಳು ಸಂಸ್ಕಾರಗಳನ್ನೂ ಉಳಿಸಿ ಬೆಳೆಸಬೇಕು ತಂದೆ, ತಾಯಿ ಗುರು ಹಿರಿಯರನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು’ ಎಂದರು.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎ.ಸುಬ್ರಹ್ಮಣ್ಯ,ಉಪಾಧ್ಯಕ್ಷ ಸ್ವರೂಪ್, ಆಡಳಿತ ಮಂಡಳಿ ಸದಸ್ಯೆ ನಯನಸ್ವರೂಪ್, ಮುಖ್ಯಶಿಕ್ಷಕ ಬಿ.ಕೆ.ಸಂಪತ್‍ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.