ADVERTISEMENT

ದೊಡ್ಡಬಳ್ಳಾಪುರ | ಎತ್ತಿನಹೊಳೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 15:18 IST
Last Updated 16 ಆಗಸ್ಟ್ 2024, 15:18 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮ ಸಮೀಪ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು
ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮ ಸಮೀಪ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಹಣಬೆ ಮೂಲಕ ಹಾದು ಹೋಗುತ್ತಿರುವ ಎತ್ತಿನಹೊಳೆ ಪೈಪ್‌ ಅಳವಡಿಕೆ ಕಾಮಗಾರಿ ನಡೆಯುವ ಸಮಯದಲ್ಲಿ ಶುಕ್ರವಾರ ಮಣ್ಣು ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಪ್ರಕರಣ ನಡೆದಿದೆ.

ಮಣ್ಣಿನಡಿ ಸಿಲುಕಿ ಮೃತಪಟ್ಟ ಯುವಕನನ್ನು ಬಿಹಾರ ರಾಜ್ಯದ ಚಿಲ್ಟುಕುಮಾರ್‌  (22) ಎಂದು ಗುರುತಿಸಲಾಗಿದೆ. ಘಟನ ಸ್ಥಳಕ್ಕೆ ಡಿವೈಎಸ್‌ಪಿ ರವಿ, ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT