ADVERTISEMENT

‘ಪರಿಸರ ಕಾಪಾಡಲು ಗಿಡ-ಮರ ಬೆಳೆಸಿ’

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 17:09 IST
Last Updated 4 ಜೂನ್ 2020, 17:09 IST
ಆನೇಕಲ್ ತಾಲ್ಲೂಕಿನ ತಿಂಡ್ಲು ಗ್ರಾಮದಲ್ಲಿ ರಾಜಲಾಂಛನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್‌ ಎಲ್.ವೈ.ರಾಜೇಶ್ ಚಾಲನೆ ನೀಡಿದರು
ಆನೇಕಲ್ ತಾಲ್ಲೂಕಿನ ತಿಂಡ್ಲು ಗ್ರಾಮದಲ್ಲಿ ರಾಜಲಾಂಛನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್‌ ಎಲ್.ವೈ.ರಾಜೇಶ್ ಚಾಲನೆ ನೀಡಿದರು   

ಆನೇಕಲ್: ಗಿಡ ಮರಗಳು ಪರಿಸರದ ಜೀವನಾಡಿಗಳು. ಪರಿಸರದ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಎಲ್ಲೆಡೆ ಗಿಡ ಮರಗಳನ್ನು ಬೆಳೆಸುವ ಪರಿಪಾಠ ಬೆಳೆಸಬೇಕಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಎಲ್.ವೈ.ರಾಜೇಶ್‌ ತಿಳಿಸಿದರು.

ಅವರು ತಾಲ್ಲೂಕಿನ ತಿಂಡ್ಲು ಗ್ರಾಮದಲ್ಲಿ ರಾಜಲಾಂಛನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ ನೀಡುತ್ತವೆ. ನೆರಳು, ಹಣ್ಣು ನೀಡಿ ನೆರವಾಗುತ್ತಿವೆ. ಆದರೆ ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳುಮಾಡಿ ನಾಶ ಮಾಡುತ್ತಿದ್ದಾನೆ. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದರು.

ADVERTISEMENT

‘ಅರಣ್ಯ ನಾಶದಿಂದ ಜೀವ ಸಂಕುಲಕ್ಕೆ ಮುಂದಿನ ದಿನಗಳಲ್ಲಿ ಅಪಾಯವಿದೆ. ಹಾಗಾಗಿ ಅರಣ್ಯ ನಾಶ ತಡೆಯಬೇಕು. ಸುತ್ತಮುತ್ತಲಿನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದರು.

ರಾಜಲಾಂಛನ ಸಂಸ್ಥೆಯ ಅಧ್ಯಕ್ಷ ನರಸಿಂಹಮೂರ್ತಿ, ಪದಾಧಿಕಾರಿಗಳಾದ ರಾಘವೇಂದ್ರರೆಡ್ಡಿ, ತೆಲಗರಹಳ್ಳಿ ಗಣೇಶ್, ತ್ರಿಪುರ ಸುಂದರಿ, ವಿನಯ್‌ ದಂಡಗಿ, ಎಚ್.ಎ.ಶೇಖರ್‌, ಮಂಜು, ಸೋಮಶೇಖರ್‌, ಮಂಜುನಾಥ್‌, ನಂದಿ, ರಾಧಿಕಾ, ರೋಹಿಣಿ, ಗೀತಾ, ಲಿಂಗರಾಜು, ಮಹೇಶ್‌, ಜಯಸೂರ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.