ADVERTISEMENT

ದುರ್ಬಲ ವರ್ಗಕ್ಕೆ ಶೂನ್ಯ ಬಡ್ಡಿ ಸಾಲ

ಗ್ರಾಮೀಣ ಮಾಸಿಕ ಸಂತೆಯಲ್ಲಿ ತಾ.ಪಂ. ಇಒ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 6:16 IST
Last Updated 13 ಸೆಪ್ಟೆಂಬರ್ 2022, 6:16 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆಯಲ್ಲಿ ಸೋಮವಾರ ನಡೆದ ಗ್ರಾಮೀಣ ಮಾಸಿಕ ಸಂತೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠಲ್ ಕಾವಲೆ ಉದ್ಘಾಟಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆಯಲ್ಲಿ ಸೋಮವಾರ ನಡೆದ ಗ್ರಾಮೀಣ ಮಾಸಿಕ ಸಂತೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠಲ್ ಕಾವಲೆ ಉದ್ಘಾಟಿಸಿದರು   

ತೂಬಗೆರೆ (ದೊಡ್ಡಬಳ್ಳಾಪುರ): ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಸಂಘಗಳಿಗೆ ಅಗತ್ಯವಿರುವ ಅನುದಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ₹5.5 ಕೋಟಿ ಅನುದಾನ ನೀಡಲಾಗಿದೆ. ಯೋಜನೆಯಡಿ ನಿರ್ದಿಷ್ಟ ಉದ್ದೇಶಗಳಿಗೆ ಕಡಿಮೆ ಬಡ್ಡಿದರದಲ್ಲಿ ₹1.5 ಸಾಲ ಸೌಲಭ್ಯ ಮತ್ತು ದುರ್ಬಲ ವರ್ಗದವರಿಗೆ ಶೂನ್ಯ ಬಡ್ಡಿಯ ಸಾಲದ ಸೌಲಭ್ಯ ದೊರೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಹೇಳಿದರು.

ತಾಲ್ಲೂಕಿನ ಮೇಳೇಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ್ದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವ ಮತ್ತು ಯೋಜನೆಯ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಗ್ರಾಮೀಣ ಮಾಸಿಕ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ 1371 ಸ್ವಸಹಾಯ ಸಂಘಗಳು ರಚಿಸಲಾಗಿದೆ. ಸುಮಾರು 17 ಸಾವಿರ ಮಹಿಳೆಯರು ಸಂಘಗಳಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಸಾಲ ಸೌಲಭ್ಯ ಪಡೆದು ಹೈನುಗಾರಿಕೆ, ಉಪ್ಪಿನಕಾಯಿ, ಹಪ್ಪಳ, ಮಡಿಕೆ, ಹಾರಗಳ ತಯಾರಿಕೆ,ಹಣಬೆ ಬೇಸಾಯ, ಬ್ಯೂಟಿಷಿನ್, ಟೈಲರಿಂಗ್ ಒಳಗೊಂಡು, ಆದಾಯ ಬರುವ ಚಟುವಟಿಕೆ ಹಮ್ಮಿಕೊಳ್ಳಬಹುದು ಎಂದರು.

ADVERTISEMENT

ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠಲ್ ಕಾವಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಹೆಚ್ಚಿನ ಮಹಿಳೆಯರು ಸ್ವಸಹಾಯ ಸಂಘ ರಚಿಸಿಕೊಂಡು ಯೋಜನೆಯಡಿ ದೊರೆಯುವ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಸದೃಢರಾಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಮುನಿರಾಜು, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಾಮಾಂಜನೇಯ, ಪಿಡಿಓ ಗಂಗಬೈರಪ್ಪ, ಒಕ್ಕೂಟದ ಅಧ್ಯಕ್ಷರಾದ ಮಂಜುಳ, ಜಿಲ್ಲಾ ಪಂಚಾಯಿತಿ ಎನ್.ಆರ್.ಎಲ್.ಎಂ ವ್ಯವಸ್ಥಾಪಕಿ ಎಂ.ಮಂಜುಳ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಎಂ.ಬಿ.ಕೆಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.