ADVERTISEMENT

ಸಿಇಒ ಭೇಟಿ: ಮೂಲ ಸೌಲಭ್ಯ ಕುರಿತು ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 14:37 IST
Last Updated 4 ನವೆಂಬರ್ 2019, 14:37 IST
ನಂದಗುಡಿ ಹೋಬಳಿ, ಈಸ್ತೂರು ಗ್ರಾಮಕ್ಕೆ ಭಾನುವಾರ ಬೆಂ.ಗ್ರಾ.ಜಿಲ್ಲಾ,ಸಿಇಒ ನಾಗರಾಜ್, ಭೇಟಿ ನೀಡಿ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು
ನಂದಗುಡಿ ಹೋಬಳಿ, ಈಸ್ತೂರು ಗ್ರಾಮಕ್ಕೆ ಭಾನುವಾರ ಬೆಂ.ಗ್ರಾ.ಜಿಲ್ಲಾ,ಸಿಇಒ ನಾಗರಾಜ್, ಭೇಟಿ ನೀಡಿ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು   

ಸೂಲಿಬೆಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಸ್ತೂರು ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಗ್ರಾಮಸ್ಥರಿಂದ ಮಾಹಿತಿ ಪಡೆದ ಅವರು, ಚರಂಡಿ ಸ್ವಚ್ಛಗೊಳಿಸಲು ಹಾಗೂ ಬೀದಿ ದೀಪ ನಿರ್ವಹಣೆ ಮಾಡಿ, ಒಂದು ವಾರದಲ್ಲಿ ವರದಿ ಕೊಡುವಂತೆ ಇಟ್ಟಸಂದ್ರ ಗ್ರಾಮ ಪಂಚಾಯಿತಿ ಅಧಿಕಾರಿ ಕೆಂಪಣ್ಣ ಅವರಿಗೆ ಸೂಚಿಸಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ ಗೌಡ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.