ADVERTISEMENT

ಉಮೇದುವಾರರ ವೆಚ್ಚ: ಮಾಹಿತಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 8:00 IST
Last Updated 22 ಮಾರ್ಚ್ 2014, 8:00 IST
ಬೆಳಗಾವಿ ಜಿಲ್ಲಾ ಪಂಚಾಯಿತಿ ಹಳೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳ ಹಾಗೂ ಉಪ ವೆಚ್ಚ ನಿರೀಕ್ಷಕರ ಸಭೆಯಲ್ಲಿ ವೆಚ್ಚ ನಿರೀಕ್ಷಕ ತಮೀಝ ವೆಂಡನ್‌ ಮಾತನಾಡಿದರು. ಡಾ. ಪ್ರವೀಣಕುಮಾರ, ರವೀಂದ್ರ ಮತ್ತಿತರರು ಚಿತ್ರದಲ್ಲಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯಿತಿ ಹಳೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳ ಹಾಗೂ ಉಪ ವೆಚ್ಚ ನಿರೀಕ್ಷಕರ ಸಭೆಯಲ್ಲಿ ವೆಚ್ಚ ನಿರೀಕ್ಷಕ ತಮೀಝ ವೆಂಡನ್‌ ಮಾತನಾಡಿದರು. ಡಾ. ಪ್ರವೀಣಕುಮಾರ, ರವೀಂದ್ರ ಮತ್ತಿತರರು ಚಿತ್ರದಲ್ಲಿದ್ದಾರೆ.   

ಬೆಳಗಾವಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಚುನಾ­ವಣಾ ವೆಚ್ಚಕ್ಕಾಗಿ ಪ್ರತ್ಯೇಕವಾಗಿ ಬ್ಯಾಂಕುಗಳಲ್ಲಿ ಆರಂಭಿಸಿರುವ ಖಾತೆಗ­ಳಲ್ಲಿನ ವ್ಯವಹಾರಗಳ ಬಗ್ಗೆ ಪ್ರತಿದಿನ ಸರಿಯಾದ ಮಾಹಿತಿಯನ್ನು ಕಡ್ಡಾಯ­ವಾಗಿ ಸಲ್ಲಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ನಿರೀಕ್ಷಕ ತಮೀಝ ವೆಂಡನ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹಳೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳ ಹಾಗೂ ಉಪ ವೆಚ್ಚ ನಿರೀಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಉಮೇ­ದು­ವಾರರು ನ್ಯಾಯ ಸಮ್ಮತವಾಗಿ ಚುನಾವಣಾ ವೆಚ್ಚವನ್ನು ನಿರ್ವಹಿಸು­ವುದರ ಬಗ್ಗೆ ನಿಗಾವಹಿಸಲು ಚುನಾವಣೆ­ಗಾಗಿಯೇ ಬೇರೊಂದು ಖಾತೆಯನ್ನು ತೆರೆಯಲು ಆದೇಶ ಹೊರಡಿಸಿದೆ. ಈ ಖಾತೆಯಿಂದ ನಡೆಯುವ ಎಲ್ಲ ಹಣಕಾಸಿನ ವ್ಯವಹಾರಗಳು ಪಾರದರ್ಶ­ಕ­ವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಬ್ಯಾಂಕ್‌ ಅಧಿಕಾರಿಗಳ ಮೇಲಿದೆ ಎಂದರು.

ಏಕ ಕಾಲಕ್ಕೆ ₨ 1 ಲಕ್ಷಕ್ಕಿಂತ ಹೆಚ್ಚು ಹಣವನ್ನು ಉಮೇದುವಾರರು ಅಥವಾ ರಾಜಕೀಯ ಪಕ್ಷಗಳು ತಮ್ಮ ಖಾತೆ­ಯಿಂದ ಪಡೆದರೆ ಈ ಖಾತೆಯ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಉಪ ವೆಚ್ಚ ನಿರೀಕ್ಷಕರಿಗೆ ಮಾಹಿತಿ ಕಳಿಸಿಕೊಡಬೇಕು. ಚುನಾ­ವಣಾ ಆಯೋಗದ ಆಶಯಗಳನ್ನು ಎಲ್ಲರೂ ಅರ್ಥಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಉಮೇದುವಾರರು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ.ಎಲ್. ಪ್ರವೀಣಕುಮಾರ ಪ್ರಾಸ್ತಾವಿಕ­ವಾಗಿ ಮಾತನಾಡಿದರು. ಜಿಲ್ಲಾ ಆಗ್ರಣೀಯ ಬ್ಯಾಂಕಿನ ವ್ಯವಸ್ಥಾಪಕ ಹೊಸಮಠ ಸ್ವಾಗತಿಸಿದರು. ಉಪ ವೆಚ್ಚ ನಿರೀಕ್ಷಕ ರವೀಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.