ರಾಮದುರ್ಗ: ಕಳೆದೆರಡು ವಾರಗಳಿಂದ ಚುನಾವಣೆ ಕಾರ್ಯಗಳಲ್ಲಿ ತೊಡಗಿದ್ದ ಅಭ್ಯರ್ಥಿಗಳು ಮತದಾನದ ಮರುದಿನ ನಿರಾಳ ಭಾವದಲ್ಲಿ ಕಾಲ ಕಳೆದರು.
ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ಬಿಡುವಿಲ್ಲದ ಪ್ರಚಾರ ಸಭೆಗಳು, ಮತದಾರರ ಮನೆಮನೆಗೆ ಭೇಟಿ, ಬಹಿರಂಗ ಸಭೆಗಳು ಸೇರಿದಂತೆ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಭಾನುವಾರ ತಮ್ಮ ವೈಯಕ್ತಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಮನೆಗೆ ಬಂದ ಹಿತೈಷಿಗಳ ಹಾಗೂ ಕಾರ್ಯಕರ್ತರ ಜತೆಗೂಡಿ ಚುನಾವಣೆಯ ಮತದಾನದ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದರು.
ಇನ್ನು ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು ಸಹ ತಮ್ಮನ್ನು ಭೇಟಿಯಾಗಲು ಬಂದ ಸ್ನೇಹಿತರು, ಹಿತೈಷಿಗಳ ಜೊತೆಗೆ ಚುನಾವಣೆಯ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದರು. ತಮ್ಮನ್ನು ಭೇಟಿ ಮಾಡಲು ಬರುತ್ತಿದ್ದ ಸ್ನೇಹಿತರಿಗೆ ಅವರವರ ಊರುಗಳಲ್ಲಿ ತಮ್ಮ ಪಕ್ಷಕ್ಕೆ ಎಷ್ಟು ಮತಗಳು ಲಭ್ಯವಾಗಿರಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.