ADVERTISEMENT

ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2015, 19:40 IST
Last Updated 25 ಏಪ್ರಿಲ್ 2015, 19:40 IST

ಬೆಳಗಾವಿ: ಖಾಸಗಿ ಬಸ್‌ಗೆ ಬೆಂಕಿ ಹತ್ತಿಕೊಂಡ ಘಟನೆ ತಾಲ್ಲೂಕಿನ ಹಿರೇಬಾಗೇವಾಡಿ ಬಳಿಯ ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಬೆಳಗಾವಿಯ ಶಿವಾಜಿನಗರದ ಜೋರೆ ಕುಟುಂಬದವರು ಆರ್‌.ಆರ್‌. ಸಂಸ್ಥೆಗೆ ಸೇರಿದ ಬಸ್‌ ಬಾಡಿಗೆ ಪಡೆದು ಗದಗದಲ್ಲಿ ನಡೆದ ವಿವಾಹ ಮುಗಿಸಿಕೊಂಡು ಬೆಳಗಾವಿಗೆ ವಾಪಸ್ಸಾಗುತ್ತಿದ್ದರು.

ಹಿರೇಬಾಗೇವಾಡಿ ಸಮೀಪ ಬಂದಾಗ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದರು. ಕೂಡಲೇ ಒಳಗಿದ್ದ ಪ್ರಯಾಣಿಕರು ಕೆಳಗಿಳಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆ ಬಸ್‌ನ ಬಹುತೇಕ ಭಾಗ ಸುಟ್ಟು ಹೋಗಿದೆ. ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT