ADVERTISEMENT

ಯಡಿಯೂರಪ್ಪಗೆ ಮಾನಸಿಕ ಚಿಕಿತ್ಸೆ ಅಗತ್ಯ: ಸಚಿವ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2017, 7:03 IST
Last Updated 3 ಡಿಸೆಂಬರ್ 2017, 7:03 IST
ಯಡಿಯೂರಪ್ಪಗೆ ಮಾನಸಿಕ ಚಿಕಿತ್ಸೆ ಅಗತ್ಯ: ಸಚಿವ ರಮೇಶ ಜಾರಕಿಹೊಳಿ
ಯಡಿಯೂರಪ್ಪಗೆ ಮಾನಸಿಕ ಚಿಕಿತ್ಸೆ ಅಗತ್ಯ: ಸಚಿವ ರಮೇಶ ಜಾರಕಿಹೊಳಿ   

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂದು ಸಹಕಾರ ಸಚಿವ ರಮೇಶ ಜಾರಕಿಹೊಳಿ ಟೀಕಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೈಗೊಂಡಿರುವ ಪರಿವರ್ತನಾ ಯಾತ್ರೆಯುದ್ದಕ್ಕೂ ಅವರು ಗಲಾಟೆ ಮಾಡಿಕೊಳ್ಳುತ್ತಿದ್ದಾರೆ. ಹತಾಶಗೊಂಡಿದ್ದಾರೆ ಎಂದರು.

ಎರಡು ಮೂರು ಕಡೆ ಬಿಟ್ಟರೆ ಉಳಿದೆಡೆ ಪರಿವರ್ತನಾ ಯಾತ್ರೆ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕೀಳಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಜಾತಿ ರಾಜಕಾರಣ, ಜಾತಿ ಸಂಘರ್ಷ ನಡೆಯುವುದಿಲ್ಲ. ಆದರೂ ಬಿಜೆಪಿಯವರು ಜಾತಿ ಸಂಘರ್ಷ ಮಾಡುತ್ತಿದ್ದಾರೆ. ಅವರ ಬೇಳೆ ಮುಂದಿನ ಚುನಾವಣೆಯಲ್ಲಿ ಬೇಯುವುದಿಲ್ಲ ಎಂದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವೇ ಬರುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಪಕ್ಷ 10ಕ್ಕಿಂತ ಕಡಿಮೆ ಸ್ಥಾನ ಪಡೆದಲ್ಲಿ ರಾಜಕೀಯವನ್ನೇ ಬಿಡುತ್ತೇನೆ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.