ಬೆಳಗಾವಿ: ಸುರಕ್ಷಿತ ಸಂಚಾರ ಹಾಗೂ ವಾಹನ ಚಾಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗಾವಿ ವೈದ್ಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ಭಾನುವಾರ ರ್ಯಾಲಿ ನಡೆಸಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಸಂಚಾರ ಜಾಗೃತಿ ಕರಪತ್ರಗಳನ್ನು ಹಂಚಿದರು. ಮುಖ್ಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು. ನಗರದಲ್ಲಿ ನಿಧಾನವಾಗಿ ವಾಹನ ಚಲಾಯಿಸಬೇಕು. ಹೆಲ್ಮೆಟ್ ಧರಿಸಿರಬೇಕು. ಟ್ರಾಫಿಕ್ ಸಿಗ್ನಲ್ಗಳ ಪಾಲನೆ ಮಾಡುವಂತೆ ಅವರು ಮನವಿ ಮಾಡಿದರು.
ಜತೆಗೆ ಮದ್ಯಪಾನ ಮಾಡಿ ಚಾಲನೆ ಮಾಡಬಾರದು, ಕರ್ಕಶ ಹಾರ್ನ್ ಬಳಸಬಾರದು, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು, ಹಿಂದೆ ಕುಳಿತವರ ಜತೆಗೆ ಮಾತನಾಡಬಾರದು. ಯಾವುದೇ ಕಾರಣಕ್ಕೂ ಟ್ರಾಫಿಕ್ ಸಿಗ್ನಲ್ಗಳನ್ನು ಉಲ್ಲಂಘನೆ ಮಾಡಬಾರದು ಎಂದು ಕರೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.