ADVERTISEMENT

ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2013, 8:29 IST
Last Updated 2 ಡಿಸೆಂಬರ್ 2013, 8:29 IST

ಬೆಳಗಾವಿ: ಹೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಕಂಪೆನಿಗಳಲ್ಲಿ ಗ್ಯಾಂಗ್‌ ಮನ್‌ಗಳಾಗಿ ಐದು  ವರ್ಷಗಳವರೆಗೆ ಸೇವೆ ಸಲ್ಲಿಸಿದ್ದು, ಈಗ ಯಾವುದೇ ಕಾರಣ ನೀಡದೇ ಕೆಲಸದಿಂದ ತೆಗೆದು ಹಾಕಲಾಗಿದೆ.

ಇದನ್ನು ಖಂಡಿಸಿ ಡಿಸೆಂಬರ್‌ 2 ರಂದು ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಗ್ಯಾಂಗ್‌ಮನ್‌ಗಳು ನಿರ್ಧರಿಸಿದ್ದಾರೆ.

ಗ್ಯಾಂಗ್‌ಮನ್‌ಗಳು ಮಾನಸಿಕವಾಗಿ, ದೈಹಿಕವಾಗಿ ಹಾಗೂ ಬಡತನದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.  ತಮಗೆ ನ್ಯಾಯ  ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.