ಬೆಳಗಾವಿ: ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ವಾಹನ ಕಳವು ಆರೋಪದ ಮೇಲೆ ಮೂವರನ್ನು ಬುಧವಾರ ಬಂಧಿಸಿ ಅವರಿಂದ ₹ 6.50 ಲಕ್ಷ ಮೌಲ್ಯದ 18 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಮಚ್ಚೆಯ ಮಾರುತಿ ಗಲ್ಲಿಯ ಅಕ್ಷಯ ಚೌಗುಲೆ, ಬಸವನಕುಡಚಿಯ ಮಹೇಶ ಅನಗೋಳಕರ ಹಾಗೂ ಆಕಾಶ ಅನಗೋಳಕರ ಬಂಧಿತರು.
ರಾಜಹಂಸಗಡ ಕೋಟೆ ಬಳಿ ದ್ವಿಚಕ್ರವಾಹನ ಕಳವಾದ ಬಗ್ಗೆ ಜುಲೈ 9ರಂದು ಪ್ರಕರಣ ದಾಖಲಾಗಿತ್ತು. ಇದರ ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ‘ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ನಗರದ ವಿವಿಧ ಭಾಗಗಳಿಂದ ಕಳವು ಮಾಡಿದ್ದ 17 ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.