ADVERTISEMENT

ಬೆಳಗಾವಿ: ಬೆಳೆ ಹಾನಿ, ₹ 319 ಕೋಟಿ ನಷ್ಟ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 14:58 IST
Last Updated 16 ಅಕ್ಟೋಬರ್ 2020, 14:58 IST

ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ವ್ಯಕ್ತಿ ಮೃತರಾಗಿದ್ದಾರೆ. ಆರು ಜಾನುವಾರು ಸಾವಿಗೀಡಾಗಿವೆ. 270 ಮನೆಗಳು ಕುಸಿದಿವೆ. 62ಕ್ಕೆ ಭಾಗಶಃ ಹಾನಿಯಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಇಲಾಖೆ ವ್ಯಾಪ್ತಿಯಲ್ಲಿ 35,238 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಅಂದಾಜು ₹ 315 ಕೋಟಿ ನಷ್ಟ ಸಂಭವಿಸಿದೆ. 35.55 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಅಂದಾಜು ₹ 4 ಕೋಟಿ ನಷ್ಟವಾಗಿದೆ. ಸಮೀಕ್ಷೆಗೆ ಸೂಚಿಸಲಾಗಿದ್ದು, ಶೀಘ್ರವೇ ಸರ್ಕಾರಕ್ಕೆ ಬೆಳೆ ಹಾನಿ ವರದಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT