ಬೆಳಗಾವಿ: ‘ಜಿಲ್ಲೆಯಲ್ಲಿ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ₹ 3.25 ಕೋಟಿ ವೆಚ್ಚದಲ್ಲಿ 177 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ದೊರೆತಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
‘ಶಾಸಕರ ನೇತೃತ್ವದ ಕಾರ್ಯಪಡೆ ಸಮಿತಿಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ಪಡೆದು ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರು ತಿಳಿಸಿದ್ದರು. ಅದರಂತೆ, 10 ತಾಲ್ಲೂಕುಗಳಿಂದ ಶಾಸಕರ ನೇತೃತ್ವದಲ್ಲಿ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾ ಪಂಚಾಯಿತಿಗೆ ಆಯಾ ವಿಭಾಗದವರು ಸಲ್ಲಿಸಿದ್ದರು. ಕ್ರಿಯಾ ಯೋಜನೆಗೆ ಆಯುಕ್ತರು ಅನುಮೋದನೆ ಕೊಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾದಲ್ಲಿ ಉಪವಿಭಾಗ ಕೇಂದ್ರಗಳಲ್ಲಿ ಚಾಲ್ತಿಯಲ್ಲಿರುವ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಿ ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಸಹಾಯವಾಣಿ
ಉಪವಿಭಾಗ– ಸಂಪರ್ಕಸಂಖ್ಯೆ
ಬೆಳಗಾವಿ– 0831 2447322
ಖಾನಾಪುರ– 08336 223708
ಬೈಲಹೊಂಗಲ– 08288 233341
ಸವದತ್ತಿ– 08330 222066
ರಾಮದುರ್ಗ– 08335 242633
ಅಥಣಿ– 9741266377
ಚಿಕ್ಕೋಡಿ– 9480634211
ಗೋಕಾಕ– 08332-225132/6360747464
ಹುಕ್ಕೇರಿ– 94488 45039
ರಾಯಬಾಗ– 9741280225
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.