ಬೆಳಗಾವಿ: ‘ಸಾರಿಗೆ ನೌಕರರ ಮುಷ್ಕರದಿಂದಾಗಿ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಶುಕ್ರವಾರ 455 ಬಸ್ಗಳ ಕಾರ್ಯಾಚರಣೆ ನಡೆಯಲಿಲ್ಲ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ‘ಪ್ರಜಾವಾಣಿ’ಗೆ ತಿಳಿಸಿದರು.
‘ಬೆಳಿಗ್ಗೆ 8ರವರೆಗೆ ಕೇವಲ 21 ಬಸ್ಗಳ ಕಾರ್ಯಾಚರಣೆಯಷ್ಟೆ ಆಗಿದೆ. ನೌಕರರು ಮುಷ್ಕರ ನಡೆಸುವುದಾಗಿ ನಮಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ. ಕೇಂದ್ರ ಸಂಘಟನೆಯವರಿಂದ ಸೂಚನೆ ಬಂತು ಎಂದು ಹೇಳುತ್ತಿದ್ದಾರೆ. ಬೆಳಿಗ್ಗೆ 8ರ ನಂತರ ಇಲ್ಲಿಂದ ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಬೇರೆ ಕಡೆಗಳಿಗೆ ಹಾಗೂ ಇತರ ಕಡೆಗಳಿಂದ ಇಲ್ಲಿಗೆ ಬಸ್ಗಳು ಬಂದಿಲ್ಲ. ಇದರಿಂದ ಎಷ್ಟು ನಷ್ಟ ಉಂಟಾಗಿದೆ ಎನ್ನುವ ಅಂದಾಜು ಶನಿವಾರ ಗೊತ್ತಾಗಲಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.