ಬೆಳಗಾವಿ: ತಾಲ್ಲೂಕಿನ ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ರೈತರೊಬ್ಬರು ಕೊಚ್ಚಿಕೊಂಡು ಹೋದ ಘಟನೆ ಶುಕ್ರವಾರ ನಡೆದಿದೆ.
ಅವರನ್ನು ಕಾಕತಿ ಗ್ರಾಮದ ಸಿದ್ರಾಯಿ ಸುತಗಟ್ಟಿ (65) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸಾಗುವಾಗ ನದಿಯ ಸೇತುವೆ ಬಳಿ ಕೈ ಕಾಲು ತೊಳೆಯಲು ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬೆಳಗಾವಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲಾದ್ದರಿಂದ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.