ಬೆಳಗಾವಿ: ವ್ಯಕ್ತಿಯು ಇಬ್ಬರು ಪುತ್ರಿಯರೊಂದಿಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕಾಡಪ್ಪ ರಂಗಾಪುರೆ (48), ಕೀರ್ತಿ (18) ಹಾಗೂ ಸ್ಫೂರ್ತಿ (16) ಮೃತರು.
ಕಾಡಪ್ಪ ಅವರ ಪತ್ನಿ ಚನ್ನವ್ವ ರಂಗಾಪುರೆ ವಾರದ ಹಿಂದೆ ಹೃದಯಾಘಾತದಿಂದ ನಿಧನರಾಗಿದ್ದರು. ಇದರಿಂದ ಮನನೊಂದು ಇಡೀ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಚಿಕ್ಕೋಡಿ ಡಿವೈಎಸ್ಪಿ ಮನೋಜ ನಾಯಕ, ಸಿಪಿಐ ಆರ್.ಆರ್. ಪಾಟೀಲ ಹಾಗೂ ಪಿಎಸ್ಐ ರಾಕೇಶ ಬಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.