ಬೆಳಗಾವಿ: ಖಾನಾಪುರ ತಾಲ್ಲೂಕಿನ ನಿಡಗಲ್ ಗ್ರಾಮದಲ್ಲಿ ಇಟ್ಟಿಗೆ ತಯಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದ ಪರಿಣಾಮ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕು ಅಸು ಗ್ರಾಮದ ನಿವಾಸಿ ಗುರುನಾಥ ಪಾಂಡುರಂಗ ನಾರ್ವೇಕರ್ (20)ಎಂದು ಗುರುತಿಸಲಾಗಿದೆ.
ಅವರು ಕೆಲವು ದಿನಗಳ ಹಿಂದೆ ಕುಟುಂಬದೊಂದಿಗೆ ನಿಡಗಲ್ ಗ್ರಾಮಕ್ಕೆ ಬಂದಿದ್ದರು.
ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.