ಬೆಳಗಾವಿ: ಇಲ್ಲಿನ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ವಿಧಾನಸಭೆಯ ಅಂದಾಜುಗಳ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಈ ಸಮಿತಿಯಲ್ಲಿ ಬೆಳಗಾವಿಯವರೇ ಆದ ಡಿ.ಎಂ. ಐಹೊಳೆ,ಹಾಲಪ್ಪ ಆಚಾರ್,ಮಹಾಂತೇಶ ದೊಡ್ಡಗೌಡರ, ಮಹಾಂತೇಶ ಕೌಜಲಗಿ, ಸತೀಶ ಜಾರಕಿಹೊಳಿ ಸದಸ್ಯರಾಗಿದ್ದಾರೆ. ಉಳಿದಂತೆ, ಎಸ್.ಎ. ರವೀಂದ್ರನಾಥ್, ವೀರಣ್ಣ ಚರಂತಿಮಠ, ಡಾ.ಶಿವರಾಜ ಪಾಟೀಲ, ಅಮೃತ್ ದೇಸಾಯಿ, ಸುನೀಲ ನಾಯ್ಕ, ಅಮರೇಗೌಡ ಬಯ್ಯಾಪುರ, ಶರಣ್ಣ ಬಸಪ್ಪ ದರ್ಶನಾಪುರ, ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ, ಡಿ.ಸಿ. ತಮ್ಮಣ್ಣ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ ಸದಸ್ಯರಾಗಿದ್ದಾರೆ.
ಸರ್ಕಾರದ ಕ್ರಮಕ್ಕೆ ಜನ ಮನ್ನಣೆ:
‘ಕೊರೊನಾ ಹಾಗೂ ಲಾಕ್ಡೌನ್ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೈಕೊಂಡ ಕ್ರಮಕ್ಕೆ ಜನರಿಂದ ಮನ್ನಣೆ ದೊರೆತಿದೆ. ಬಿಹಾರ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡಿದ ಕೊಡುಗೆಯಿಂದಾಗಿ ಬಿಜೆಪಿ ಮತ್ತು ಜೆಡಿಯುಗೆ ಜನರು ಬೆಂಬಲ ನೀಡಿದ್ದಾರೆ. ಅಂತೆಯೇ ರಾಜ್ಯದ ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಫಲಿತಾಂಶ ನಮ್ಮ ಸರ್ಕಾರದ ಕ್ರಮಗಳಿಗೆ ಮನ್ನಣೆ ಕೊಟ್ಟಂತಾಗಿದೆ’ ಎಂದು ಅಭಯ ಪಾಟೀಲ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.