ADVERTISEMENT

ಚಿಕ್ಕಣ್ಣನವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 4:23 IST
Last Updated 9 ಮಾರ್ಚ್ 2021, 4:23 IST
 ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳ ತಂಡ ದಾಳಿ
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳ ತಂಡ ದಾಳಿ   

ಬೆಳಗಾವಿ: ಬೆಳಗಾವಿ ವೃತ್ತದ (ವಿದ್ಯುತ್ ಪರಿವೀಕ್ಷಣಾಲಯ) ಉಪ ಮುಖ್ಯ ವಿದ್ಯುತ್ ಪರಿವೀಕ್ಷಕ ಹಣಮಂತ ಶಿವಪ್ಪ ಚಿಕ್ಕಣ್ಣನವರ ಅವರ ಮನೆಗಳು ಹಾಗೂ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳ ತಂಡದವರು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅನಗೋಳದ ಚನ್ನಮ್ಮ ನಗರದಲ್ಲಿರುವ ಕುಟುಂಬ ಸಮೇತ ವಾಸವಿರುವ ಮನೆ, ಅವರು ಕಾರ್ಯನಿರ್ವಹಿಸಿರುವ ಕಚೇರಿ, ಪುತ್ರ ತುಷಾರ ಹೆಸರಿನಲ್ಲಿ ಚನ್ನಮ್ಮ ನಗರದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿರುವ ಎರಡು ಅಂಗಡಿಗಳು ಹಾಗೂ ಮೂರು ಪ್ಲ್ಯಾಟ್ ಗಳು ಮತ್ತು ಹಣಮಂತ ಅವರ ಸಹೋದರರು ಹಾಗೂ ಕುಟುಂಬದವರು ವಾಸವಿರುವ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗೋಲಭಾವಿ ಗ್ರಾಮಸ ತೋಟದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.