ADVERTISEMENT

ಬೆಳಗಾವಿ: ಮೂಡಲಗಿ ಬಳಿ ಲಾರಿ-ಬೈಕ್ ಮಧ್ಯೆ ಅಪಘಾತ: ಇಬ್ಬರು ಸವಾರರ ಸಾವು

​ಪ್ರಜಾವಾಣಿ ವಾರ್ತೆ
Published 15 ಜೂನ್ 2025, 18:22 IST
Last Updated 15 ಜೂನ್ 2025, 18:22 IST
<div class="paragraphs"><p>ಸುರೇಶ, ಶ್ರೀಶೈಲ</p></div>

ಸುರೇಶ, ಶ್ರೀಶೈಲ

   

ಮೂಡಲಗಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಗುರ್ಲಾಪುರ ಬಳಿ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ ಹಾಗೂ ಲಾರಿ ಮಧ್ಯೆ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಟ್ಟಣದ ಕಜ್ಜಾಳ ಮಡ್ಡಿಯ ಶ್ರೀಶೈಲ ಹಾದಿಮನಿ(34), ತಾಲ್ಲೂಕಿನ ರಂಗಾಪುರ ಗ್ರಾಮದ ಸುರೇಶ ಮಾರಾಪುರ(32) ಮೃತರು.

ADVERTISEMENT

ಘಟನಾ ಸ್ಥಳಕ್ಕೆ ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.