ನಾಗರಮುನ್ನೋಳಿ (ಬೆಳಗಾವಿ): ಚಿಕ್ಕೋಡಿ ರಸ್ತೆ ಸಮೀಪದ ರೈಲು ನಿಲ್ದಾಣ ಬಳಿ ಶನಿವಾರ ರಾತ್ರಿ ದ್ವಿಚಕ್ರವಾಹನ ಹಾಗೂ ಅಪರಿಚಿತ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಮೃತರಾಗಿ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ರಾಮದ ಸಿದ್ದಪ್ಪ ಪ್ರಕಾಶ ಜಿಪರೆ (25) ಮೃತರು. ಅವರನ್ನು ಗೋಕಾಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಮೂಲಗಳು ತಿಳಿಸಿವೆ. ಮಾಳಪ್ಪ ಕೊಟಬಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.