ADVERTISEMENT

ಅಪಘಾತ: ಇಬ್ಬರು ಯುವಕರ ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 4:38 IST
Last Updated 6 ಅಕ್ಟೋಬರ್ 2021, 4:38 IST
ಹರ್ಷವರ್ಧನ
ಹರ್ಷವರ್ಧನ   

ನಿಪ್ಪಾಣಿ: ಇಲ್ಲಿನ ಮಹಾತ್ಮ ಗಾಂಧಿ ಆಸ್ಪತ್ರೆ ಎದುರಿಗೆ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಎರಡು ಬೈಕ್‍ಗಳು ಓವರ್ ಟೇಕ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವನ್ನಪ್ಪಿದ್ದು, ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿಪ್ಪಾಣಿ ನಗರಸಭೆಯ ಮಾಜಿ ನಗರಾಧ್ಯಕ್ಷ ಗಜೇಂದ್ರ ಪೋಳ ಪುತ್ರ ಹರ್ಷವರ್ಧನ(19) ಹಾಗೂ ದರ್ಗಾ ಗಲ್ಲಿಯ ಆಯಾನ ಗುಲ್ಜಾರ್(23) ಮೃತರು. ಗಾಯಾಳು ಸುಮಿತ್‌ ಎಂಬುವವರನ್ನು ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.