ಬೈಲಹೊಂಗಲ: ಮಲಪ್ರಭಾ ನದಿಯ ದಡದಲ್ಲಿ ರೈತರು ಅಳವಡಿಸಿದ್ದ ವಿದ್ಯುತ್ ಪಂಪಸೆಟ್ಗಳ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಿಂದ ಪಂಪ್ಸೆಟ್ ಹಾಗೂ ವಾಹನ ಸೇರಿ ₹5ಲಕ್ಷ ಮೌಲ್ಯದ ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ.
ತಾಲ್ಲೂಕಿನ ಇಂಗಳ ಗ್ರಾಮದ ವ್ಯಾಪ್ತಿಯ ಮಲಪ್ರಭಾ ನದಿಯ ದಂಡೆಯ ಜಾಕ್ವೆಲ್ ಹತ್ತಿರ ಹೊಸೂರು ಗ್ರಾಮದ ರೈತರು ಈ ಪಂಪ್ಸೆಟ್ಗಳನ್ನು ಅಳವಡಿಸಿದ್ದರು. ಈಚೆಗೆ ಕಳ್ಳತನ ಮಾಡಿದ ಬಗ್ಗೆ ಮುರಗೋಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮುರಗೋಡ ಪೊಲೀಸರು ಸಾಮಗ್ರಿಗಳ ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.