ಬೆಳಗಾವಿ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲ್ಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಾಬಣ್ಣ ಅಣ್ಣಿಗೇರಿ(76) ಬುಧವಾರ ತಡರಾತ್ರಿ ಮೃತಪಟ್ಟರು. ಈ ವಿಷಯ ಕೇಳಿದ ಪತ್ನಿ ಶಿವಬಸವ್ವ(70) ಕೆಲಹೊತ್ತಿನಲ್ಲೇ ಹೃದಯಾಘಾತಕ್ಕೀಡಾಗಿ ನಿಧನರಾದರು.
ಏಕಕಾಲಕ್ಕೆ ವೃದ್ಧ ದಂಪತಿ ಅಗಲಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇಂದು ಮಧ್ಯಾಹ್ನ 12 ಗಂಟೆಗೆ ಇಬ್ಬರ ಅಂತ್ಯಕ್ರಿಯೆಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.