ಬೆಳಗಾವಿ: ‘ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲ ಸಮುದಾಯದವರನ್ನೂ ಸಮಾನವಾಗಿ ಕಂಡಿದ್ದಾರೆ. ಹಲವು ಸಂದರ್ಭದಲ್ಲಿ ರಾಜ್ಯವನ್ನು ಸಂಕಟದಿಂದ ಪಾರು ಮಾಡಿದ್ದಾರೆ. ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ’ ಎಂದು ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದ್ದಾರೆ.
‘ಅವರು ವೀರಶೈವ-ಲಿಂಗಾಯತ ಸಮಾಜದ ನಾಯಕರು ಮಾತ್ರವಲ್ಲ; ಎಲ್ಲ ಸಮುದಾಯಗಳನ್ನು ಅತ್ಯಂತ ಸೌಹಾರ್ದದಿಂದ ಕಂಡಿದ್ದಾರೆ. ಬಿಜೆಪಿ ಪಕ್ಷವನ್ನು ಸಂಘಟಿಸಿದ್ದಾರೆ. ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದಾರೆ. ಅವರು ಪೂರ್ಣಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಳ್ಳಬೇಕು. ಮಹಾಸಭಾ ಅವರ ಬೆನ್ನಿಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.