ADVERTISEMENT

ಅಂಗಡಿ ಕಾಲೇಜಲ್ಲಿ ಅಂಬೇಡ್ಕರ್‌ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 9:07 IST
Last Updated 14 ಏಪ್ರಿಲ್ 2019, 9:07 IST
ಬೆಳಗಾವಿಯ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ಭಾನುವಾರ ಬಿ.ಆರ್. ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು
ಬೆಳಗಾವಿಯ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ಭಾನುವಾರ ಬಿ.ಆರ್. ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು   

ಬೆಳಗವಿ: ‘ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಜ್ಞಾನವೇ ಶಕ್ತಿ ಎಂದು ನಂಬಿದ ಅವರ ಜ್ಞಾನ ಮತ್ತು ಆದರ್ಶಗಳನ್ನು ಯುವಜನತೆ ಅರಿತುಕೊಂಡು ಮುನ್ನಡೆಯಬೇಕು’ ಎಂದು ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜು ಪ್ರಾಚಾರ್ಯ ಸಂಜಯ ಪೂಜಾರಿ ತಿಳಿಸಿದರು.

ಕಾಲೇಜಿನಲ್ಲಿ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಅವರ ಸಾಮಾಜಿಕ ಆದರ್ಶಗಳಾದ ಸ್ವಾತಂತ್ರ್ಯ, ಸಮಾನತೆ, ಮಾನವೀಯತೆ ಮತ್ತು ಸಹೋದತ್ವದ ಭಾವನೆಗಳನ್ನು ನಾವೆಲ್ಲರೂ ಜೀವನದ ತತ್ವಗಳನ್ನಾಗಿ ಅಳವಡಿಸಿಕೊಳ್ಳಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದರು.

ADVERTISEMENT

ಕಾಲೇಜಿನ ಪ್ರೊ.ಸದಾನಂದ ದೊಡಮನಿ, ವಿಜಯ ಕುಲಕರ್ಣಿ, ಪ್ರೊ.ಕಿರಣ ಪೋತದಾರ, ಡಾ.ಅಶೋಕ ಹುಲಗಬಾಳಿ, ಡಾ.ಪ್ರಭಾಕರ ಮುತಾಲಿಕ ದೇಸಾಯಿ, ಪ್ರೊ.ವಸಂತ ಉಪಾಧ್ಯೆ, ದೈಹಿಕ ಶಿಕ್ಷಣ ನಿರ್ದೇಶಕ ವಿಶಾಂತ ಧಮೋಣೆ, ಮಂಜುಶ್ರೀ ಹಾವಣ್ಣವರ, ಅಂಕಿತಾ ಕೊಣ್ಣೂರ, ಶಂಕರ ಹಿರೇಮಠ, ಗಿರೀಶ ಮಡ್ಡಿಮನಿ, ಬಸವರಾಜ ಕುಂಬಾರ, ಪ್ರೊ.ಸಾಗರ ಬಿರ್ಜೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.