ಬೆಳಗಾವಿ: ಉತ್ಸವದ ದಿನ ಅಸಮಾಧಾನದ ಮಾತೇಕೆ? – ಹೀಗೆ ಕೇಳಿದವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್.
ಇಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಳ್ಳಲು ಸಾಂಬ್ರಾ ವಿಮಾನನಿಲ್ದಾಣಕ್ಕೆ ಭಾನುವಾರ ಬಂದ ಅವರು, ಅಸಮಾಧಾನಿತ ಶಾಸಕರು, ಬ್ಲ್ಯಾಕ್ಮೇಲ್ ರಾಜಕಾರಣ, ಸಿ.ಡಿ. ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
‘ಇಂದು ದೊಡ್ಡ ಮಟ್ಟದ ಉತ್ಸವದ ದಿನವಾಗಿದೆ. ಆ ಬಗ್ಗೆ ಈಗೇಕೆ ಮಾತನಾಡುವುದು. ಬಹಳ ದಿನಗಳ ಬಳಿಕ ಇಲ್ಲಿ ಪಕ್ಷದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ನಾವೆಲ್ಲರೂ ಅವರನ್ನು ಅಭಿನಂದಿಸುತ್ತಿದ್ದೇವೆ’ ಎಂದರು.
‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಇಂದು ಚರ್ಚೆ ಆಗುವುದಿಲ್ಲ. ಆದರೆ, ಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.