ADVERTISEMENT

ಬೆಳಗಾವಿ: ಉಪಚುನಾವಣೆ ಕರ್ತವ್ಯದಲ್ಲಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 16:42 IST
Last Updated 16 ಏಪ್ರಿಲ್ 2021, 16:42 IST
ಜೆ.ಬಿ. ಪೂಜಾರ (57) ಮೃತರು.
ಜೆ.ಬಿ. ಪೂಜಾರ (57) ಮೃತರು.   

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕರ್ತವ್ಯದಲ್ಲಿದ್ದ ಎಎಸ್‌ಐ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಜೆ.ಬಿ. ಪೂಜಾರ (57) ಮೃತರು. ಅವರು ಹುಕ್ಕೇರಿ ತಾಲ್ಲೂಕು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಗೋಕಾಕ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಅವರನ್ನು ನೇಮಿಸಲಾಗಿತ್ತು. ಘಟಪ್ರಭಾದ ಎಸ್‍ಬಿಟಿ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಪರಿಶೀಲನೆ ನಡೆಸುವ ವೇಳೆ ಕುಸಿದುಬಿದ್ದರು. ಪ್ರಾಥಮಿಕ ವರದಿ ಪ್ರಕಾರ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT