ಬೆಳಗಾವಿ: ಅಥಣಿಯ ವಿದ್ಯಾರ್ಥಿನಿ ಸ್ನೇಹಾ ನಾರಾಯಣ ಕುಲಕರ್ಣಿ ಎಂ.ಎಸ್ಸಿ. ಭೌತವಿಜ್ಞಾನ ವಿಷಯದಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿ ಮೈಸೂರು ವಿಶ್ವವಿದ್ಯಾಲಯದಿಂದ 6 ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.
ಅವರು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸ್ನಾತಕೋತ್ತರ ಪದವಿಯಲ್ಲಿ ಟಾಪರ್ ಎನಿಸಿ ಸಾಧನೆ ತೋರಿದ್ದಾರೆ. ಅವರಿಗೆ ಈಚೆಗೆ ಮೈಸೂರಿನಲ್ಲಿ ನಡೆದ 100ನೇ ಘಟಿಕೋತ್ಸವದಲ್ಲಿ ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಪದಕ ಹಾಗೂ ಪ್ರಮಾಣಪತ್ರಗಳನ್ನು ಪ್ರದಾನ ಮಾಡಿದರು.
‘ನನ್ನ ಈ ಸಾಧನೆಗೆ ಅಮ್ಮನೇ ಸ್ಫೂರ್ತಿ. ಕಷ್ಟದ ದಿನಗಳಲ್ಲಿ ಆತ್ಮಸ್ಥೈರ್ಯ ತುಂಬಿ ಬೆಳೆಸಿದ್ದಾಳೆ. ನನ್ನ ಯಶಸ್ಸು ಅವಳಿಗೆ ಸಲ್ಲುತ್ತದೆ. ಸಂಶೋಧನೆಯಲ್ಲಿ ತೊಡಗಿಕೊಳ್ಳಬೇಕು. ಉಪನ್ಯಾಸಕಿಯಾಗಬೇಕು. ನನ್ನಂತೆ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ನೆರವಾಗಬೇಕು ಎಂಬುದು ನನ್ನ ಆಸೆಯಾಗಿದೆ’ ಎನ್ನುತ್ತಾರೆ ಅವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.