ADVERTISEMENT

ಅಥಣಿ | ಹಸಿರೀಕರಣ ಯೋಜನೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 13:14 IST
Last Updated 19 ಜೂನ್ 2020, 13:14 IST
ಅಥಣಿಯ ಎಪಿಎಂಸಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರ ಚಾಲನೆ ನೀಡಿದರು
ಅಥಣಿಯ ಎಪಿಎಂಸಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರ ಚಾಲನೆ ನೀಡಿದರು   

ಅಥಣಿ: ‘ಒಂದು ಗಿಡ ನೆಟ್ಟು ಬೆಳೆಸಿದರೆ ಒಂದು ಜೀವ ಉಳಿಸಿದಂತೆ. ಕಡಿದರೆ ಹಲವು ಜೀವಗಳನ್ನು ನಾಶಪಡಿಸಿದಂತೆ ಆಗುತ್ತದೆ. ಹೀಗಾಗಿ, ಉತ್ತಮ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಗರ ಹಸಿರೀಕರಣ ಯೋಜನೆ– ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಊರಿಗೊಂದು ವನ–ಮನೆಗೊಂದು ಗಿಡ ಇದ್ದರೆ ಉಲ್ಲಾಸದ ವಾತಾವರಣ ಇರುತ್ತದೆ. ನಮ್ಮ ಪೂರ್ವಿಕರು ಪ್ರಕೃತಿ ಆರಾಧಕರಾಗಿದ್ದರು. ಆ ಪ್ರೀತಿಯನ್ನು ನಾವೂ ತೋರಬೇಕು’ ಎಂದರು.

ADVERTISEMENT
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಕೆ. ಚಂದ್ರಶೇಖರ ಮಾತನಾಡಿದರು. ಎಪಿಎಂಸಿ ಆವರಣದಲ್ಲಿ 675, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 63, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 118, ಅಗ್ನಿಶಾಮಕ ದಳದ ಕಚೇರಿ ಆವರಣದಲ್ಲಿ 45 ಬೇವು, ಆಲ, ಅರಳಿ, ಬಸರಿ, ಬಸವನಪಾದ, ಹುಣಸೆ ಮೊದಲಾದ ಸಸಿಗಳನ್ನು ನೆಡಲಾಯಿತು.
ಸಹಾಯಕ ಅರಣ್ಯಾಧಿಕಾರಿ ಶಿವಾನಂದ ನಾಯಿಕವಾಡಿ, ವಲಯ ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ, ತಹಶೀಲ್ದಾರ್‌ ದುಂಡಪ್ಪ ಕೊಮಾರ, ಗ್ರೇಡ್‌–2 ತಹಶೀಲ್ದಾರ್‌ ರಾಜಕುಮಾರ ಬುರ್ಲಿ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಸ್. ಯಾದವಾಡ, ಡಿಎಸ್ಪಿ ಎಸ್.ವಿ. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.