ಅಥಣಿ: ‘ಒಂದು ಗಿಡ ನೆಟ್ಟು ಬೆಳೆಸಿದರೆ ಒಂದು ಜೀವ ಉಳಿಸಿದಂತೆ. ಕಡಿದರೆ ಹಲವು ಜೀವಗಳನ್ನು ನಾಶಪಡಿಸಿದಂತೆ ಆಗುತ್ತದೆ. ಹೀಗಾಗಿ, ಉತ್ತಮ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಗರ ಹಸಿರೀಕರಣ ಯೋಜನೆ– ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಊರಿಗೊಂದು ವನ–ಮನೆಗೊಂದು ಗಿಡ ಇದ್ದರೆ ಉಲ್ಲಾಸದ ವಾತಾವರಣ ಇರುತ್ತದೆ. ನಮ್ಮ ಪೂರ್ವಿಕರು ಪ್ರಕೃತಿ ಆರಾಧಕರಾಗಿದ್ದರು. ಆ ಪ್ರೀತಿಯನ್ನು ನಾವೂ ತೋರಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.