ADVERTISEMENT

ಪ್ರಕಾಶಗೆ ‘ಯುವ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 9:09 IST
Last Updated 26 ಮಾರ್ಚ್ 2019, 9:09 IST
ಪ್ರಕಾಶ ಗಿರಿಮಲ್ಲನವರ
ಪ್ರಕಾಶ ಗಿರಿಮಲ್ಲನವರ   

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕು ಉಳ್ಳಾಗಡ್ಡಿ ಖಾನಾಪುರದ ಸಾಹಿತಿ ಪ್ರಕಾಶ ಗಿರಿಮಲ್ಲನವರ ಅವರು ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ನೀಡುವ ‘ಯುವಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 25ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಮಾರ್ಚ್‌ 31ರಂದು ವಿಜಯಪುರದ ಕಂದಗಲ್ಲ ಹನುಮಂತರಾಯರ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಎಸ್.‌ಎಂ. ಜಾಮದಾರ ಪ್ರದಾನ ಮಾಡಲಿದ್ದಾರೆ. ಸಾಹಿತಿ ಗುರುಲಿಂಗ ಕಾಪಸೆ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮುಖ್ಯಅತಿಥಿಯಾಗಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT