ADVERTISEMENT

ಮುಖ್ಯಮಂತ್ರಿ ಬದಲಾವಣೆ ವದಂತಿಯಷ್ಟೆ: ಸಚಿವ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 9:24 IST
Last Updated 19 ಸೆಪ್ಟೆಂಬರ್ 2020, 9:24 IST
ಸಚಿವ ರಮೇಶ ಜಾರಕಿಹೊಳಿ
ಸಚಿವ ರಮೇಶ ಜಾರಕಿಹೊಳಿ   

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುವುದು ಎಂಬುದು ವದಂತಿಯಷ್ಟೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ’ ಎಂದರು.

‘ಸಂಪುಟ ಪುನರ್‌ರಚಿಸಬೇಕೋ ಅಥವಾ ವಿಸ್ತರಣೆ ಮಾಡಬೇಕೋ ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಶಾಸಕ ಉಮೇಶ ಕತ್ತಿ ಅವರನ್ನು ಸಚಿವರನ್ನಾಗಿ ಮಾಡಿದರೆ ಸಂತೋಷ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.