ADVERTISEMENT

ಮೈಸೂರಿನ ದಲಿತ ಹೋರಾಟಗಾರ ರವೀಂದ್ರ ಹಾರೋಹಳ್ಳಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 13:46 IST
Last Updated 30 ಏಪ್ರಿಲ್ 2022, 13:46 IST

ಚಿಕ್ಕೋಡಿ: ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರಿಂದ ಶುಕ್ರವಾರ ಬಂಧಿತರಾಗಿದ್ದ ಮೈಸೂರಿನ ದಲಿತ ಹೋರಾಟಗಾರ ಹಾಗೂ ಬರಹಗಾರ ರವೀಂದ್ರ ಹಾರೋಹಳ್ಳಿ ಅವರಿಗೆ ಶನಿವಾರ ಜಾಮೀನು ಮಂಜೂರಾಗಿದೆ.

ಪಟ್ಟಣದ ನ್ಯಾಯಾಲಯದಲ್ಲಿ ನ್ಯಾಯಾಧೀಶರು ರಜೆ ಇದ್ದ ಕಾರಣ ಆರೋಪಿಯನ್ನು ಹಾಜರುಪಡಿಸಲಾಗಲಿಲ್ಲ. ಸಮೀಪದ ಕಾಗವಾಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ಜಾಮೀನು‌ ಮಂಜೂರಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT