ADVERTISEMENT

ಗೊಂದಲಗಳಿಗೆ ಒಂದೆರಡು ದಿನಗಳಲ್ಲಿ ತೆರೆ: ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 21:56 IST
Last Updated 1 ಜುಲೈ 2021, 21:56 IST
ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ   

ಬೆಳಗಾವಿ: ‘ಗೋಕಾಕದ ಬಿಜೆಪಿ ಶಾಸಕ,ಹಿರಿಯ ಸಹೋದರ ರಮೇಶ ಜಾರಕಿಹೊಳಿ ವಿಷಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಶೀಘ್ರವೇ ತೆರೆ ಎಳೆಯಲಿದ್ದೇವೆ’ ಎಂದು ಕೆಎಂಎಫ್‌ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗೋಕಾಕದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, ‘ನಾನು ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ. ಮಾಧ್ಯಮದಲ್ಲಿ ಆ ರೀತಿಯ ಸುದ್ದಿ ಏಕೆ ಬರುತ್ತಿದೆಯೋ ಗೊತ್ತಿಲ್ಲ. ಪಕ್ಷದಿಂದಲೂ ಅಂತಹ ಆಹ್ವಾನ ಬಂದಿಲ್ಲ. ಕೆಎಂಎಫ್‌ ಅಧ್ಯಕ್ಷನಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

‘ರಮೇಶ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಅವರು ಜುಲೈ 2ರಂದು ಗೋಕಾಕಕ್ಕೆ ಬರಲಿದ್ದಾರೆ. ನಾವೆಲ್ಲರೂ ಸಭೆ ನಡೆಸಿ ಚರ್ಚಿಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತೇವೆ. ಕೆಲವು ವಿಷಯಗಳನ್ನು ಸ್ಪಷ್ಟಪಡಿಸಬೇಕಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.