ADVERTISEMENT

ಸಮತೋಲನದಿಂದ ಕೂಡಿದ ಸಚಿವ ಸಂಪುಟ: ಎಂ.ಬಿ. ಝಿರಲಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 12:57 IST
Last Updated 10 ಜುಲೈ 2021, 12:57 IST
ಎಂ.ಬಿ. ಝಿರಲಿ
ಎಂ.ಬಿ. ಝಿರಲಿ   

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಮತೋಲನದಿಂದ ಕೂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಹೇಳಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪುಟದಲ್ಲಿ ರಾಜ್ಯದ ಇನ್ನೂ ನಾಲ್ವರಿಗೆ ಸ್ಥಾನ ಕಲ್ಪಿಸಲಾಗಿದೆ. ದೇಶದ ಹಲವೆಡೆಯ ಹೊಸಬರನ್ನೂ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಬಹುತೇಕರು ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ. ಎಲ್ಲ ಜಾತಿ, ವರ್ಗಗಳಿಗೂ ಪ್ರಾತಿನಿಧ್ಯ ಕೊಡಲಾಗಿದೆ’ ಎಂದು ತಿಳಿಸಿದರು.

‘ಮಹಿಳೆಯರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಚಿಂತನೆಯಂತೆ ಹಿಂದುಳಿದ ವರ್ಗಗಳಿಗೂ ಆದ್ಯತೆ ನೀಡಲಾಗಿದೆ. 12 ಪರಿಶಿಷ್ಟ ಜಾತಿ, 8 ಪರಿಶಿಷ್ಟ ಪಂಗಡದವರು, 28 ಮಂದಿ ಹಿಂದುಳಿದ ವರ್ಗಗಳವರು, ಐವರು ಅಲ್ಪಸಂಖ್ಯಾತರಿಗೆ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಸಚಿವ ಸಂಪುಟವಾಗಿದೆ’ ಎಂದರು.

ADVERTISEMENT

ಸಂಸದೆ ಮಂಗಲಾ ಸುರೇಶ ಅಂಗಡಿ, ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಶಾಸಕ ಅನಿಲ ಬೆನಕೆ, ಜಿಲ್ಲಾ ಘಟಕದ ವಕ್ತಾರ ಹನುಮಂತ ಕೊಂಗಾಲಿ, ಮಾಧ್ಯಮ ಸಂಚಾಲಕ ಶರದ್ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.