ADVERTISEMENT

ರಿಲ್ಯಾಕ್ಸ್ ಮೂಡ್‌ನಲ್ಲಿ ಕಾಗೆ: ಕಾರ್ಯಕರ್ತರ ಭೇಟಿ, ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 19:45 IST
Last Updated 6 ಡಿಸೆಂಬರ್ 2019, 19:45 IST
ಉಗಾರದಲ್ಲಿ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು
ಉಗಾರದಲ್ಲಿ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು   

ಮೋಳೆ: ಹದಿನೈದು ದಿನಗಳಿಂದ ಎಡೆಬಿಡದೇ ಬಿರುಸಿನ ಪ್ರಚಾರ ನಡೆಸಿದ್ದ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಶುಕ್ರವಾರ ರಿಲ್ಯಾಕ್ಸ್ ಮೂಡ್‌ನಲ್ಲಿ ಕಾಲ ಕಳೆದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜು ಕಾಗೆ ಹಾಗೂ ಬಿಜೆಪಿಯ ಶ್ರೀಮಂತ ಪಾಟೀಲ ನಡುವೆ ಪೈಪೋಟಿ ಏರ್ಪಟಿದ್ದು, ಎರಡೂ ಪಕ್ಷಗಳು ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದವು. ಹೀಗಾಗಿ, ಪ್ರಚಾರದ ಭರಾಟೆ ಬಿರುಸಾಗಿ ನಡೆದಿತ್ತು. ಗುರುವಾರ ಮತದಾನ ಮುಗಿದಿರುವುದರಿಂದ ಅಭ್ಯರ್ಥಿಗಳು ನಿರಾಳರಾಗಿದ್ದಾರೆ. ರಾಜು ಕಾಗೆ ಸೇರದಿಂತೆ ಬಹುತೇಕ ಅಭ್ಯರ್ಥಿಗಳು ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದರು.

ಕಾಗೆ, ಮನೆಗೆ ಬಂದ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರನ್ನು ಭೇಟಿಯಾದರು. ಯಾವ್ಯಾವ ಮತಗಟ್ಟೆಯಲ್ಲಿ ಎಷ್ಟೆಷ್ಟು ಮತಗಳು ಬರಬಹುದೆಂಬ ಲೆಕ್ಕಾಚಾರ ಕುರಿತೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಕ್ಷೇತ್ರದಲ್ಲಿನ ತಮ್ಮ ಅನುಭವಗಳನ್ನು ಮುಖಂಡರು ಹಂಚಿಕೊಂಡರು.

ADVERTISEMENT

ಮುಖಂಡರಾದ ರವೀಂದ್ರ ಗಾಣಿಗೇರ, ತಾತ್ಯಾಸಾಬ ಕುಚನೂರೆ, ಅಶೋಕ ಗಾಣಿಗೇರ, ಗಜಾನನ ಯರಂಡೋಲಿ, ಸುರೇಶ ಗಾಣಿಗೇರ, ಸಂಜಯ ಭಿರಡಿ, ಆದಿನಾಥ ದಾನೊಳ್ಳಿ, ಬಾಹುಬಲಿ ಕುಸನಾಳೆ, ಸಂಜು ಕುಸನಾಳೆ, ಅರುಣ ಗಾಣಿಗೇರ, ರಾಹುಲ ಕಟಗೇರಿ, ಗುರುರಾಜ ಮಡಿವಾಳರ, ಮುರಗೆಪ್ಪ ಮಹಾಜನ, ಮಲ್ಲಪ್ಪ ಪಾಟೀಲ, ವಿಶ್ವನಾಥ ನಾಮದಾರ, ಅನಿಲ ಸತ್ತಿ, ಬಸನಗೌಡ ಪಾಟೀಲ, ಕಾಮಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.