ಬೆಳಗಾವಿ: ಇಲ್ಲಿನ ಅಳತೆ, ತೂಕ ಮತ್ತು ಮಾಪನಾ ಇಲಾಖೆಯ ಸಹಾಯಕ ಕಂಟ್ರೋಲ್ರ ಸುಭಾಷ ಉಪ್ಪಾರ ಅವರ ಮನೆ, ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಇಲ್ಲಿನ ರುಕ್ಮಿಣಿ ನಗರದಲ್ಲಿರುವ ಅವರ ಮನೆ, ಸ್ವಗ್ರಾಮವಾದ ಬಸವನ ಕುಡಚಿಯಲ್ಲಿರುವ ಮನೆ, ಸಂಬಂಧಿಕರ ಮನೆ ಹಾಗೂ ಕಚೇರಿ ಸೇರಿದಂತೆ ನಾಲ್ಕು ಕಡೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.
ಎಸ್ಪಿ ಬಿ.ಎಸ್. ನೇಮಗೌಡರ ನೇತೃತ್ವದಲ್ಲಿ ಡಿಎಸ್ಪಿ ಶರಣಪ್ಪ ಸೇರಿದಂತೆ ಏಳು ಜನ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ 25 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.