ADVERTISEMENT

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 16:28 IST
Last Updated 1 ಜನವರಿ 2021, 16:28 IST
ರಾಜು ಚಿಕ್ಕನಗೌಡರ
ರಾಜು ಚಿಕ್ಕನಗೌಡರ   

ಬೆಳಗಾವಿ: ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ (40) ಬೆಂಗಳೂರಿನ ಖಾಸಗಿ ಹೋಟೆಲ್‌ ಕೊಠಡಿಯಲ್ಲಿ ತಂಗಿದ್ದ ವೇಳೆ ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಅವಿವಾಹಿತರಾಗಿದ್ದ ಅವರಿಗೆ ತಾಯಿ, ಸಹೋದರ ಹಾಗೂ ಸಹೋದರಿ ಇದ್ದಾರೆ.

ಬೈಲಹೊಂಗಲ ತಾಲ್ಲೂಕು ನೇಸರಗಿ ಮೂಲದವರಾದ ಅವರು, ಇಲ್ಲಿನ ಶಿವಬಸವ ನಗರದಲ್ಲಿ ತಾಯಿ ಜೊತೆ ವಾಸವಿದ್ದರು. 21 ವರ್ಷಗಳಿಂದ ಆರ್‌ಎಸ್‌ಎಸ್, ಎಬಿವಿಪಿ ಮತ್ತು ಬಿಜೆಪಿ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದರು. ಇಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದರು. ರೈಲ್ವೆ ಖಾತೆ ರಾಜ್ಯ ಸಚಿವ ದಿವಂಗತ ಸುರೇಶ ಅಂಗಡಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ವಿಷಯವಾಗಿ ಗುರುವಾರ ಬೆಂಗಳೂರಿನಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು ಮತ್ತು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಕಾರ್ಯಕಾರಿಣಿಗೆ ತೆರಳಲು ಬೆಂಗಳೂರಿನಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.