ಬೆಳಗಾವಿ: ಬಳ್ಳಾರಿಯಿಂದ ಇಲ್ಲಿಗೆ ಬರುತ್ತಿದ್ದ ಆಮ್ಲಜನಕ ಟ್ಯಾಂಕರ್ ತಾಲ್ಲೂಕಿನ ಮುತ್ನಾಳ ಗ್ರಾಮದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತಕ್ಕೀಡಾಗಿದೆ. ಸೋರಿಕೆ ಸಂಭವಿಸಿಲ್ಲ.
ಬಳ್ಳಾರಿಯ ಜೆಎಸ್ ಡಬ್ಲ್ಯು ಘಟಕದಿಂದ ಬರುತ್ತಿದ್ದ ಟ್ಯಾಂಕರ್ ಮುಂದಿದ್ದ ಟ್ರಕ್ ಗೆ ಗುದ್ದಿದೆ. ಪ್ರಾಣ ಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಆ ಟ್ಯಾಂಕರ್ ಚಲಿಸುವ ಸ್ಥಿತಿಯಲ್ಲಿಲ್ಲ. ಬೇರೊಂದು ಟ್ಯಾಂಕರ್ ಗೆ ವರ್ಗಾಯಿಸಿ ಬೆಳಗಾವಿಗೆ ಸಾಗಿಸಲು ನಿರ್ಧರಿಸಲಾಗಿದೆ.
ಬೆಳಗಾವಿಗೆ ತೆರಳುವ ವಾಹನಗಳು ಸರ್ವಿಸ್ ರಸ್ತೆ ಮೂಲಕ ಸಾಗುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.